ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಿಗೆ ಕ್ಷೇತ್ರಕ್ಕೆ ಮಾಜಿ ಶಾಸಕ ಶರಣಪ್ಪ ಸುಣಗಾರ ಹಾಗೂ ಸಿಂದಗಿಗೆ ಅಶೋಕ ಮನಗೂಳಿ ಅವರಿಗೆ ಟಿಕೆಟ್ ಫೈನಲ್ ಮಾಡಲಾಗಿದೆ.
ದೇವರ ಹಿಪ್ಪರಗಿಯಲ್ಲಿ ಎಸ್.ಆರ್ ಪಾಟೀಲ ಹೆಸರು ತುಂಬಾ ಚರ್ಚೆಯಲ್ಲಿತ್ತು. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಶಿಷ್ಯ ಆಗಿರುವ ಸಿಂದಗಿ ಮಾಜಿ ಶಾಸಕ ಶರಣಪ್ಪ ಸುಣಗಾರಗೆ ಟಿಕೆಟ್ ಫೈನಲ್ ಆಗಿದೆ. ಇನ್ನು ಸಿಂದಗಿಯಲ್ಲಿ ಅಶೋಕ ಮನಗೂಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠ್ಠಲ ಕೋಳೂರು, ರಾಕೇಶ ಕಲ್ಲೂರ ನಡುವೆ ಫೈಟ್ ಇತ್ತು. ಕೊನೆಗೆ ಅಶೋಕ ಮನಗೂಳಿಗೆ ಟಿಕೆಟ್ ಅಂತಿಮವಾಗಿದೆ.