ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ/ಧಾರವಾಡ: ಕಳೆದ ಮೂರು ದಿನಗಳ ಹಿಂದೆ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಹತ್ತಿರ ನಡೆದಿತ್ತು. ಸ್ಥಳದಲ್ಲಿ 7 ಜನರು ಮೃತಪಟ್ಟಿದ್ದರು.
ಆಸ್ಪತ್ರೆಗೆ ಸಾಗಿಸದ ನಂತರ ಒಬ್ಬರು, ಭಾನುವಾರ ಒಬ್ಬರು, ಬುಧವಾರ ಒಬ್ಬರು ಮೃತಪಟ್ಟಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುತ್ತು ಮರಿಗೌಡರ(16) ಸಾವನ್ನಪ್ಪಿದ ಯುವಕ.