ಪ್ರಜಾಸ್ತ್ರ ಸುದ್ದಿ
ಧಾರವಾಡ: ಕರೋನಾ ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಬಂದ್ ಮಾಡಲಾಗ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತ್ನಾಡಿದ ಅವರು, ಜುಲೈ 15ರಿಂದ 24ರ ತನಕ ಲಾಕ್ ಡೌನ್ ಘೋಷಿಸಲಾಗಿದೆ ಎಂದಿದ್ದಾರೆ.
ನಿರ್ಮಾಣ ಹಂತದ ಕಾಮಗಾರಿ, ಕೃಷಿ ಚಟುವಟಿಕೆ, ಕೈಗಾರಿಕೆ, ಅಗತ್ಯ ವಸ್ತುಗಳ ಪೂರೈಕೆಗೆ ವಿನಾಯ್ತಿ ನೀಡಲಾಗಿದೆ. ಉಳಿದಂತೆ ಬುಧವಾರದಿಂದ 10 ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡದಲ್ಲಿ 1 ವಾರಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ. ಕರೋನಾ ನಿಯಂತ್ರಣದ ಸಲುವಾಗಿ ಗುರುವಾರದಿಂದು ಒಂದು ವಾರಗಳ ಕಾಲ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ