ಧಾರವಾಡ ಪ್ರಕರಣ: ಕಾಂಗ್ರೆಸ್ ನಾಯಕರು ವಾಗ್ದಾಳಿ

391

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಧಾರವಾಡದಲ್ಲಿನ ಐತಿಹಾಸಿಕ ನುಗ್ಗಿಕೇರೆ ಆಂಜನೇಯ ದೇವಸ್ಥಾನದ ಹತ್ತಿರ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ಅಂಗಡಿಗಳ ಮೇಲೆ ಶ್ರೀರಾಮ್ ಸೇನೆ ಕಾರ್ಯಕರ್ತರು ಶನಿವಾರ ದಾಳಿ ನಡೆಸಿದ್ದಾರೆ. ಈ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕರು, ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾತನಾಡಿ, ಶ್ರೀರಾಮ್ ಸೇನೆ ಗೂಂಡಾಗಳ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ ಎಂದು ಪ್ರಶ್ನಿಸಿದ್ದಾರೆ. ಸಿಎಂ ಆಗಿ ಬೊಮ್ಮಾಯಿ ಇನ್ನೂ ಅಧಿಕಾರದಲ್ಲಿದ್ದರೆ, ಮುಸ್ಲಿಂ ವರ್ತಕರ ಮೇಲೆ ದೌರ್ಜನ್ಯವೆಸಗಿದ ಶ್ರೀರಾಮ್ ಸೇನೆ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು. ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಕುರ್ಚಿ ಮಾನ ಕಾಪಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ, ಬೊಮ್ಮಾಯಿಯವರೆ ನೀವು ಹಸುವಿನ ವೇಷ ತೊಟ್ಟು ಗೋಮುಖವ್ಯಾಘ್ರ ಆಗುವುದು ಬೇಡ ಎಂದಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!