ಪ್ರಜಾಸ್ತ್ರ ಸುದ್ದಿ
ಧಾರವಾಡ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಗೆ ಸೋಲುಣಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಜಿದ್ದಾಜಿದ್ದಿನಲ್ಲಿ ಕೈ ಮೇಲುಗೈ ಸಾಧಿಸಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಗೆ ಭಾರಿ ಮುಖಭಂಗವಾಗಿದೆ. ಇಲ್ಲಿ ನಗರ, ಗ್ರಾಮೀಣ ಭಾಗದಲ್ಲಿ ಬಿಜೆಪಿ ಶಾಸಕರಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕರಿದ್ದಾರೆ. ಬಿಜೆಪಿ ಸಂಸದರಿದ್ದಾರೆ. ರಾಜಕೀಯವಾಗಿ ಶೆಟ್ಟರ್ ಹಿಡಿತವಿದೆ. ಹೀಗಿದ್ದರೂ ಅವರ ಸಹೋದರ ಸೋಲು ಅನುಭವಿಸಿದ್ದಾರೆ.