ಪ್ರಜಾಸ್ತ್ರ ಸುದ್ದಿ
ಧಾರವಾಡ: ಸಿಎಂ ಬಿ.ಎಸ್ ಯಡಿಯೂರಪ್ಪ 16 ಜಿಲ್ಲೆಗಳಿಗೆ ಅನ್ ಲಾಕ್ ಘೋಷಣೆ ಮಾಡಿ, 13 ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತೆ ಎಂದು ಹೇಳಿದ್ರು. ಈಗ ಧಾರವಾಡ ಜಿಲ್ಲೆಯನ್ನ ಸಹ ಅನ್ ಲಾಕ್ ಮಾಡಲಾಗಿದೆ.
ಸೋಮವಾರದಿಂದ ಎಲ್ಲ ವ್ಯಾಪಾರ ವಹಿವಾಟು ಬೆಳಗ್ಗೆ 6ರಿಂದ ಸಂಜೆ 5ಗಂಟೆಯ ತನಕ ನಡೆಸಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಪ್ರಮಾಣ ಶೇಕಡ 5ಕ್ಕಿಂತ ಕಡಿಮೆ ಇರುವ ಕಾರಣ ಅನ್ ಲಾಕ್ ಮಾಡಲಾಗಿದೆ ಎನ್ನಲಾಗ್ತಿದೆ. ಅನ್ ಲಾಕ್ ಬಗ್ಗೆ ಸಚಿವ ಜಗದೀಶ ಶೆಟ್ಟರ ಅವರು ಸಿಎಂ ಬಳಿ ಮಾಡಿಕೊಂಡ ಮನವಿಯಿಂದಾಗಿ ಈ ಹೊಸ ಆದೇಶ ಹೊರಡಿಸಲಾಗಿದೆಯಂತೆ.