ಪ್ರಜಾಸ್ತ್ರ ಸುದ್ದಿ
ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸ್ತಿರುವ ಸಿಬಿಐ ವಿಜಯ ಕುಲ್ಕರ್ಣಿ ಎಂಬುವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಕರೆದಿದ್ದಾರೆ.
ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಹಲವು ವಿಚಾರಗಳನ್ನ ಬಾಯಿ ಬಿಟ್ಟಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮಾಜಿ ಸಚಿವ ವಿನಯ ಕುಲ್ಕರ್ಣಿ ಸಹೋದರ ವಿಜಯ ಕುಲ್ಕರ್ಣಿಗೆ ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ನಗರದಲ್ಲಿರುವ ಸಿಬಿಐ ಕಚೇರಿಗೆ ವಿಜಯ ಕುಲ್ಕರ್ಣಿ ಹಾಜರಾಗಿದ್ದು, ವಿಚಾರಣೆ ನಡೆಯುತ್ತಿದೆ.