ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಮಸ್ಯೆ ಕುರಿತು ಮನವಿ ಪತ್ರ ಸಲ್ಲಿಸಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಿರಬೇಕಾದರೆ, ಸುದ್ದಿ ವಾಹಿನಿಯೊಂದಿಗೆ ಮಾತನಾಡುವ ಸಂದರ್ಭದಲ್ಲಿ ನಾಲಿಗೆ ಹರಿಬಿಟ್ಟು ಅವಳನ್ನ ರೇಪ್ ಮಾಡಿದೀನಾ ಎಂದಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ನ ನಾಯಕರು ಸೇರಿದಂತೆ ಜನಪ್ರತಿನಿಧಿಗಳು ಮಂಗಳರಾತಿ ಎತ್ತುತ್ತಿದ್ದಾರೆ. ಮೂರು ಬಿಟ್ಟವರಂತೆ ಸೂಕ್ಷ್ಮತೆ ಇಲ್ಲದೆ ವಿಕೃತ ಮನಸ್ಸನ್ನು ಪ್ರದರ್ಶಿಸಿ ಜವಾಬ್ದಾರಿಯುತ ಜನಪ್ರತಿನಿಧಿಯಾಗಲು ಯೋಗ್ಯನಲ್ಲವೆಂದು ತನ್ನ ನೈಜ ಮುಖದ ಅನಾವರಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನ ಕುಸುಮಾ ಹನುಮಂತರಾಯಪ್ಪ ಟ್ವೀಟರ್ ನಲ್ಲಿ ಕಿಡಿ ಕಾರಿದ್ದಾರೆ.