ಪ್ರಜಾಸ್ತ್ರ ಸುದ್ದಿ
ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ಶವವೊಂದು ಪತ್ತೆಯಾಗಿದೆ. ಪಟ್ಟಣದಲ್ಲಿರುವ ಐತಿಹಾಸಿಕ ಸಂಗಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿನ ಮುಳ್ಳಿನಕಂಟಿಯಲ್ಲಿ ಅಂದಾಜು 43 ವರ್ಷದ ವ್ಯಕ್ತಿ ಶವ ಪತ್ತೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿದೆ.
ಮೃತದೇಹದ ಹತ್ತಿರದಲ್ಲಿ ಬ್ಯಾಗ್ ವೊಂದು ಸಿಕ್ಕಿದೆ. ಅದರಲ್ಲಿ ಒಂದು ಮೊಬೈಲ್, ಎಂದೆರಡು ಜೊತೆ ಬಟ್ಟೆ ಹಾಗೂ ಆಧಾರ್ ಕಾರ್ಡ್ ಸಿಕ್ಕಿದೆ. ಆಧಾರ್ ಕಾರ್ಡ್ ಆಧಾರದ ಮೇಲೆ ಮೃತ ವ್ಯಕ್ತಿ ನಿಂಗಪ್ಪ ಗೊಲ್ಲಾಳಪ್ಪ ಮಾಗಣಗೇರಿ ಎಂದು ಹೇಳಲಾಗ್ತಿದೆ. ಮೃತದೇಹಕ್ಕೆ ಸಂಬಂಧಪಟ್ಟಂತೆ ಕುಟುಂಬಸ್ಥರ ಹಾಗೂ ಸಂಬಂಧಿಕರ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.
ಪತ್ತೆಯಾಗಿರುವ ಶವದ ಸ್ಥಿತಿ ನೋಡಿದ್ರೆ ಸುಮಾರು ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಸಿಂದಗಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೂ ಕೊಲೆಯೋ ಅನ್ನೋದು ತನಿಖೆಯಿಂದ ತಿಳಿದು ಬರಬೇಕಿದೆ.