ಬೆಂಗಳೂರು: ರಾಷ್ಟ್ರಪತಿ ಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಲುವಾಗಿ ಆಯೋಜಿಸಿರುವ ಔತಣಕೂಟದಲ್ಲಿ ಸಿಎಂ ಬಿಎಸ್ವೈ ಸಹ ಭಾಗಿಯಾಗಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಬೆಳಗ್ಗೆ 11.30ಕ್ಕೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.
ಟ್ರಂಪ್ ಔತಣಕೂಟದಲ್ಲಿ ಭಾಗವಹಿಸಲು ಸಿಎಂಗೆ ಆಹ್ವಾನ ನೀಡಲಾಗಿದೆ. ಹೀಗಾಗಿ ಸಿಎಂ ದೆಹಲಿಗೆ ಪಯಣ ಬೆಳಸಿ ಮಧ್ಯಾಹ್ನ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳಲಿದ್ದಾರೆ. ಸಂಜೆ ನಡೆಯುವ ಔತಣಕೂಟದಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಸಿಎಂ ಭಾಗವಹಿಸ್ತಿದ್ದಾರೆ.