ಪ್ರಜಾಸ್ತ್ರ ಸಿನಿಮಾ ಡೆಸ್ಕ್
ನಟ ಪ್ರಭಾಸ್, ನಟಿ ಕೃತಿ ಸನೋನ್, ಸನ್ನಿ ಸಿಂಗ್ ನಟನೆಯ ಆದಿಪುರುಷ ಚಿತ್ರ ರಿಲೀಸ್ ಗೆ ಸಿದ್ಧವಾಗಿದೆ. ಹೀಗಾಗಿ ತಿರುಪತಿಯಲ್ಲಿ ಮಂಗಳವಾರ ಪ್ರೀ ರಿಲೀಸ್ ಇವೆಂಟ್ ಮಾಡಿದೆ. ಅಂತಿಮ ಟ್ರೇಲರ್ ಸಹ ಬಿಡುಗಡೆ ಮಾಡಿದೆ.
ಜೂನ್ 7 ಇಂದು ಚಿತ್ರದ ನಿರ್ದೇಶಕ ಓಂ ರಾವುತ್, ನಟಿ ಕೃತಿ ಸನೋನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿಂದ ವಾಪಸ್ ಹೋಗುವಾಗ ನಟಿ ಕೆನ್ನೆಗೆ ನಿರ್ದೇಶಕ ಓಂ ರಾವುತ್ ಮುತ್ತು ಕೊಟ್ಟಿರುವುದು ವಿವಾದ ಎಬ್ಬಿಸಿದೆ. ದೇವಸ್ಥಾನದ ಆವರಣದಲ್ಲಿ ಈ ರೀತಿಯ ನಡವಳಿಕೆ ಎಷ್ಟು ಸರಿ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ರಮೇಶ್ ನಾಯ್ಡು ಟ್ವೀಟ್ ಮಾಡಿದ್ದರು. ನಂತರ ಡಿಲೀಟ್ ಮಾಡಿದ್ದಾರೆ.
ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಸಾರ್ವಜನಿಕವಾಗಿ ಇದೆಲ್ಲ ಬೇಕಿತ್ತಾ? ದೇವಸ್ಥಾನದ ಆವರಣದಲ್ಲಿ ಈ ರೀತಿ ನಡೆದುಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ.