ನಿರ್ದೇಶಕ ವಿಜಯ ರೆಡ್ಡಿ ನಿಧನ: ಅಪ್ಪು ಸಂತಾಪ

308

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಹಿರಿಯ ನಿರ್ದೇಶಕ ವಿಜಯ ರೆಡ್ಡಿ ಅವರ ನಿಧನಕ್ಕೆ ಪವರ್ ಸ್ಟಾರ್ ಪುನೀತರಾಜಕುಮಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಬಹು ಅಂಗಾಗ ಕಾಯಿಲೆಯಿಂದ ಬಳಲುತ್ತಿದ್ದ ನಿರ್ದೇಶಕ ವಿಜಯ ರೆಡ್ಡಿ ಅವರು ಶುಕ್ರವಾರ, ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನಮ್ಮ ತಂದೆಯವರಿಗೆ ಮರೆಯಲಾಗದ ಚಿತ್ರಗಳನ್ನ ನೀಡಿದ್ದಾರೆ. ಮಯೂರ, ಗಂಧದ ಗುಡಿ, ನಾ ನಿನ್ನ ಮರೆಯಲಾರೆ, ಭಕ್ತ ಪ್ರಹ್ಲಾದ ಸೇರಿ ಹಲವು ಸೂಪರ್ ಹಿಟ್ ಚಿತ್ರಗಳನ್ನ ನಿರ್ದೇಶನ ಮಾಡಿದ್ದಾರೆ. ಭಕ್ತ ಪ್ರಹ್ಲಾದ ಚಿತ್ರದಲ್ಲಿ ನಾನು ನಟಿಸಿರುವುದು ನನ್ನ ಭಾಗ್ಯ ಎಂದಿರುವ ನಟ ಪುನೀತರಾಜಕುಮಾರ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!