ರಾಯಚೂರು: ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ, ನೈತಿಕತೆ ಹೊಣೆಹೊತ್ತು ಸಿಎಂ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡಲಿ ಅಂತಾ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತ್ನಾಡಿದ ಅವರು, ಅನರ್ಹ ಶಾಸಕರ ತೀರ್ಪಿನ ಬಗ್ಗೆ ಮಾತ್ನಾಡಿದ ಅವರು, ಸ್ಪೀಕರ್ ಆದೇಶ ಎತ್ತಿ ಹಿಡಿದಿದೆ. ಇದನ್ನ ಕಾಂಗ್ರೆಸ್ ಎತ್ತಿ ಹಿಡಿದಿದೆ. ಹೀಗಾಗಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದಕ್ಕೆ ನೈತಿಕತೆಯಿಲ್ಲ. ಈ ಬಗ್ಗೆ ಶೀಘ್ರದಲ್ಲೇ ರಾಷ್ಟ್ರಪತಿಗೆ ದೂರು ನೀಡಲಾಗುತ್ತೆ. ಅಲ್ದೇ, ಬಿಜೆಪಿ ಸರ್ಕಾರ ವಜಾ ಮಾಡುವಂತೆ ಒತ್ತಾಯಿಸಲಾಗುತ್ತೆ ಅಂತಾ ಹೇಳಿದ್ರು.