ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಕಳೆದ ರಾತ್ರಿ ಕಿಡಿಗೇಡಿಗಳು ಇಲ್ಲಿಯ ಕೋಟನೂರ(ಡಿ) ಪ್ರದೇಶದ ಲಿಂಬಿಣಿ ಪಾರ್ಕ್ ನಲ್ಲಿರುವ ಅಂಬೇಡ್ಕರ್ ಮೂರ್ತಿಗೆ ಅಗೌರವ ತೋರಿಸಿದ್ದಾರೆ. ಇದು ಮುಂಜಾನೆ ತಿಳಿಯುತ್ತಿದ್ದಂತೆ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ರಾಮ ಮಂದಿರ ಸರ್ಕಲ್, ನಾಗನಹಳ್ಳಿ ರಿಂಗ್ ರೋಡ್, ಲುಂಬಿಣಿ ಪಾರ್ಕ್ ಸುತ್ತಮುತ್ತು ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಹಾ ನಾಯಕನಿಗೆ ಅಪಮಾನ ಮಾಡಿದ್ದವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಿ. ಇಲ್ಲದಿದ್ದರೆ ನಮ್ಮ ಕೈಗೆ ಒಪ್ಪಿಸಿ ನಾವು ಶಿಕ್ಷೆ ನೀಡುತ್ತೇವೆ ಎಂದು ದಲಿತಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹಣಸಗಿ ಮಾತನಾಡಿ, ಈಗಾಗ್ಲೇ ದೂರು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗೆ ಈಗಾಗ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ತನಿಖೆ ಮುಗಿದ ಬಳಿಕ ನಿಮ್ಮ ಬೇಡಿಕೆಯಂತೆ ಹೊಸ ಪ್ರತಿಮೆಯನ್ನು ಜಿಲ್ಲಾಡಳಿತದಿಂದ ನಿರ್ಮಿಸಿಕೊಡಲಾಗುವುದು ಎಂದು ಹೇಳುವ ಮೂಲಕ ಪ್ರತಿಭಟನಕಾರರ ಮನವೊಲಿಸಿದರು.