ಪ್ರಜಾಸ್ತ್ರ ಸುದ್ದಿ
ಸಿಂದಗಿ: ಜನವರಿ 26ರ ಗಣರಾಜ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಅಗೌರವ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ, ದಲಿತ ಸೇನೆ ತಾಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ದಲಿತ ಸೇನೆ ಕಾರ್ಯಕರ್ತರು, ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ನ್ಯಾಯಾಧೀಶರನ್ನು ವಜಾ ಮಾಡಬೇಕೆಂದು ಆಗ್ರಹಿಸಿದರು. ತಾಲೂಕಾಧ್ಯಕ್ಷ ಬಾಲಕೃಷ್ಣ ಛಲವಾದಿ, ಎಂ.ಎ ಸಿಂದಗಿಕರ, ಶ್ರೀನಾಥ ಹೊಸಮನಿ ಮಾತನಾಡಿ, ಅಂಬೇಡ್ಕರ್ ಅವರನ್ನು ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜನಗೌಡ ವಿರುದ್ಧ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಅಡಿಯಲ್ಲಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ನಂತರ ಗ್ರೇಡ್-2 ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ರವಿ ದೊಡಮನಿ, ರಾಕೇಶ ಕಾಂಬಳೆ, ರಜತ ತಾಂಬೆ, ದತ್ತು ನಾಲ್ಕಮನ, ಅರ್ಜುನ ಭಾವನೂರ, ಶರಣಮ್ಮ ನಾಯಕ ಸೇರಿದಂತೆ ಅನೇಕರು ಭಾಗವಹಿಸಿದ್ದರು.