ಕೋಮು ಗಲಭೆಯಲ್ಲಿ ಪ್ರಾಣಬಿಟ್ಟ ಯುವಕರ ಕುಟುಂಬಕ್ಕೆ ಪರಿಹಾರ

142

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಕೋಮು ಗಲಭೆ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ 6 ಯುವಕರ ಕುಟುಂಬಗಳಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರದ ಚೆಕ್ ವಿತರಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ 25 ಲಕ್ಷ ಮೊತ್ತದ ಚಕ್ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕೋಮು ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ಬಳಿಕವೂ ಪರಿಹಾರ ವಿತರಣೆಯಲ್ಲಿ ತಾರತಮ್ಯ ನಡೆಸಿತ್ತು. ಬಿಜೆಪಿಯ ಸಂವಿಧಾನ ವಿರೋಧಿ ತಾರತಮ್ಯ ಅಳಿಸಿ ಹಾಕಿದ್ದೇವೆ ಎಂದರು.

ನಮ್ಮ ಅವಧಿಯಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡಲಾಗುತ್ತೆ. ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಅಂತಾ ಹೇಳಿದರು. ಈ ವೇಳೆ ಸಚಿವರಾದ ಜಮೀರ್ ಅಹ್ಮದ್, ಚೆಲುವರಾಯಸ್ವಾಮಿ ಸೇರಿ ಅಧಿಕಾರಿಗಳಿದ್ದರು.




Leave a Reply

Your email address will not be published. Required fields are marked *

error: Content is protected !!