ಡಿಜೆ ಹಳ್ಳಿ ‘ಕಿಡಿ’ಗೇಡಿತನ: 140ಕ್ಕೂ ಹೆಚ್ಚು ಜನರ ಬಂಧನ.. 144 ಸೆಕ್ಷನ್ ಜಾರಿ

365

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಅವರ ಸಂಬಂಧಿಯೊಬ್ಬರು ಫೇಸ್ ಬುಕ್ ನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ವಿವಾದಿತ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ, ಮಂಗಳವಾರ ತಡರಾತ್ರಿ ಗಲಾಟೆ ಮಾಡಲಾಗಿದೆ. ಈ ಸಂಬಂಧ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಈ ಬಗ್ಗೆ ಮಾತ್ನಾಡಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು, ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿ ಮಾಡಲಾಗಿದೆ. ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದಿದ್ದಾರೆ. ಇನ್ನು ಈ ಘಟನೆ ಸಂಬಂಧ 140ಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿದೆ.

ಮಂಗಳವಾರ ತಡರಾತ್ರಿ ನಡೆದ ಘಟನೆಯಲ್ಲಿ 50ಕ್ಕೂ ಹೆಚ್ಚು ಪೊಲೀಸ್ರು ಗಾಯಗೊಂಡಿದ್ದಾರೆ. ಸಿಆರ್ ಪಿಎಫ್ ತುಕಡಿಯ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಶಾಸಕ ಅಖಂಡ ಶ್ರೀನಿವಾಸ ಅವರ ಕಾವಲ್ ಭೈರಸಂದ್ರ ಹತ್ತಿರದ ನೆಲಮಹಡಿ ಬೆಂಕಿಗೆ ಆಹುತಿಯಾಗಿದೆ.




Leave a Reply

Your email address will not be published. Required fields are marked *

error: Content is protected !!