ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಮತ್ತೆ 60 ಮಂದಿಯನ್ನ ಬಂಧಿಸಲಾಗಿದೆ. ಇದರೊಂದಿಗೆ 206 ಮಂದಿಯನ್ನ ಬಂಧಿಸಲಾಗಿದೆ ಎಂದು ನಗರ ಜಂಟಿ ಪೊಲೀಸ್ ಆಯುಕ್ತ ಸಂದೀಪ ಪಾಟೀಲ ಹೇಳಿದ್ದಾರೆ.
ಮಂಗಳವಾರ ರಾತ್ರಿ ನಡೆದ ಗೂಂಡಾಗಿರಿ ಇಡೀ ರಾಜ್ಯವನ್ನ ಮತ್ತೊಮ್ಮೆ ತಲೆ ತಗ್ಗಿಸುವಂತೆ ಮಾಡಿತು. ಅಲ್ದೇ, ಈ ಘಟನೆ ರಾಜಕೀಯ ಹಗ್ಗಜಗ್ಗಾಟಕ್ಕೂ ಕಾರಣವಾಗಿದ್ದು ನಾಚಿಕೆಗೇಡಿನ ಸಂಗತಿ. ಆದ್ರೆ, ಪರಿಸ್ಥಿತಿ ಇನ್ನೂ ಬೂದಿಮುಚ್ಚಿದ ಕೆಂಡದಂತಿದೆ. ಆಗಸ್ಟ್ 15ರ ವರೆಗೂ ಈ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.