50 ದಿನಗಳ ನಂತರ ರಾಜ್ಯದಲ್ಲಿ ಬಿಜೆಪಿ ಇರಲ್ಲ: ಡಿಕೆಶಿ

158

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದಿನಿಂದ 50 ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಇರಲ್ಲ. ಕಣ್ಮರೆಯಾಗಲಿದೆ. ಇದನ್ನು ಬರೆದಿಟ್ಟುಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕುರುಡುಮಲೆ ಯಾತ್ರೆಗೂ ಮೊದಲು ನಗರದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ಭಷ್ಟ್ರಾಚಾರದಲ್ಲಿ ಮುಳುಗಿದೆ. ಬರೀ ಲಂಚ ಎನ್ನುವ ಮಾತುಗಳು. ಹೀಗಾಗಿ ಪ್ರಜಾಧ್ವನಿ ಯಾತ್ರೆ ನಡೆಸಿದ್ದು, ಜನರ ಸಮಸ್ಯೆಗಳನ್ನು ತೆಗೆದುಕೊಳ್ಳುತ್ತೇವೆ. ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. 136 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಟಿಕೆಟ್ ನೀಡುವ ವಿಚಾರ ಸಂಬಂಧ ರಾಜ್ಯ ಮಟ್ಟದ ಸಮಿತಿಯಲ್ಲಿ ಸಭೆ ನಡೆದಿದೆ. ಪ್ರತಿ ಜಿಲ್ಲೆಯಿಂದ ಎಐಸಿಸಿ ಕಾರ್ಯದರ್ಶಿಗಳು, ಕಾರ್ಯಾಧ್ಯಕ್ಷರು ಸಭೆ ಮಾಡಿ ವರದಿ ಕೊಟ್ಟಿದ್ದಾರೆ. ಇದರ ಆಧಾರದ ಮೇಲೆ ಟಿಕೆಟ್ ನೀಡಲಾಗುತ್ತೆ. ರಾಜ್ಯದ ಪಟ್ಟಿ ಅಂತಿಮಗೊಳಿಸಿ ಎಐಸಿಸಿ ಕೇಂದ್ರ ಸಮಿತಿಗೆ ಕಳುಹಿಸುತ್ತೇವೆ. ಅವರು ಅಂತಿಮ ಪಟ್ಟಿ ಬಿಡುಗಡೆ ಮಾಡುತ್ತಾರೆ ಅಂತಾ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!