ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ದಿನೇಶ ಗುಂಡೂರಾವ ಜಾಗಕ್ಕೆ ಡಿಕೆಶಿ ಎಂಟ್ರಿಯಾಗುವ ಸಾಧ್ಯತೆಗಳಿವೆ. ಈಗಾಗ್ಲೇ ಈ ಸ್ಥಾನಕ್ಕಾಗಿ ಅನೇಕರು ಪೈಪೋಟಿ ನಡೆಸಿದ್ದಾರೆ. ಆದ್ರೆ, ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರ ಫಿಕ್ಸ್ ಅಂತಾ ಹೇಳಲಾಗ್ತಿದೆ.
ಜನವರಿ 2ನೇ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ನಡೆಯಲಿದೆ ಎಂದು ಕಾಂಗ್ರೆಸ್ ನ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಯಾಕಂದ್ರೆ, ಜನವರಿ 20ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಇದಕ್ಕೂ ಮೊದ್ಲೇ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ನಡೆಯಬೇಕಿದೆ.
ಇದರ ಜೊತೆಗೆ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಇದಕ್ಕೂ ಪೈಪೋಟಿ ನಡೆದಿದೆ. ಸಿದ್ದು ಅವರನ್ನೇ ಮನವೊಲಿಸಬೇಕಾ? ಬೇರೆಯವರ ಆಯ್ಕೆ ಮಾಡಬೇಕಾ ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕಿದೆ.