ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ, ಸಚಿವ ಸ್ಥಾನದ ಆಮೀಷ ತೋರಿಸಿ ಸೆಳೆದುಕೊಳ್ಳುವ ಪ್ರಯತ್ನ ನಡೆದಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಶುಕ್ರವಾರ ಹೇಳಿದ್ದು, ವೈರಲ್ ಆಗಿದೆ. ಈ ಕುರಿತು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದ್ದಾರೆ.
ನಾನು ನಮ್ಮ ಶಾಸಕರ ಬಳಿ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಆಂತರಿಕ ವಿಚಾರಗಳನ್ನು ಯಾರೂ ಬಹಿರಂಗ ಹೇಳಿಕೆ ನೀಡಬಾರದು. ಇದು ವೇಳೆ ಬಹಿರಂಗ ಹೇಳಿಕೆ ನೀಡಿದರೆ ನೋಟಿಸ್ ನೀಡಲಾಗುತ್ತೆ. ಇದೇ ಲಾಸ್ಟ್ ವಾರ್ನಿಂಗ್ ಎಂದು ಗುಡುಗಿದ್ದಾರೆ.
ನಮ್ಮ ಶಾಸಕರನ್ನು ಸೆಳೆಯಲು ದೊಡ್ಡವರು ಪ್ರಯತ್ನಿಸುತ್ತಿದ್ದಾರೆ. ಆದರೆ, ಫಲ ಸಿಕ್ಕಿಲ್ಲ. ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಪ್ರತಿಯೊಬ್ಬರ ನಡೆಯೂ ನಮಗೆ ಗೊತ್ತಿದೆ ಎಂದು ಹೇಳುವ ಮೂಲಕ ವಿಪಕ್ಷದವರಿಗೂ, ಸ್ವಪಕ್ಷೀಯರಿಗೂ ಎಚ್ಚರಿಕೆ ನೀಡಿದರು.