ಬೆಳ್ಳಂಬೆಳಗ್ಗೆ ಎಂಟಿಬಿ ಮನೆಗೆ ಡಿಕೆಶಿ: ಅಡ್ಡಗೋಡೆಯ ಮೇಲೆ ಶಾಸಕ

353

ಬೆಂಗಳೂರು: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ ಅವರು ಇಂದು ಬೆಳ್ಳಂಬೆಳಗ್ಗೆ ಶಾಸಕ ಎಂಟಿಬಿ ನಾಗರಾಜ ಮನೆಗೆ ಭೇಟಿ ನೀಡಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಅವರನ್ನ ಮನವೊಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮಾಡ್ತಿದ್ದಾರೆ.

ಗರುಡಾಚಾರ್ ಪಾಳ್ಯದಲ್ಲಿರುವ ಎಂಟಿಬಿ ನಾಗರಾಜ ಮನೆಗೆ ಡಿಕೆ ಶಿವಕುಮಾರ, ಕುಣಿಗಲ್ ಶಾಸಕ ರಂಗನಾಥ ಭೇಟಿ ನೀಡಿ ಅವರ ಮನವೊಲಿಸುವ ಕೆಲಸ ಮಾಡ್ತಿದ್ದಾರೆ. ಹೀಗಾಗಿ ಇಂದು ಬೆಳಗ್ಗೆ ಸುಮಾರು 5ಗಂಟೆಗೆ ಅವರ ಮನೆಗೆ ಹೋಗಿದ್ದಾರೆ. ನಿಮ್ಮ ಬೇಡಿಕೆಗಳನ್ನ ಈಡೇರಿಸುತ್ತೇವೆ. ರಾಜೀನಾಮೆಯನ್ನ ಹಿಂಪಡೆಯಿರಿ ಅಂತಾ ಹೇಳ್ತಿದ್ದಾರೆ. ಆದ್ರೆ, ನಾಗರಾಜ ಇದರ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಾನು ಅಡ್ಡಗೋಡೆಯ ಮೇಲೆ ಇದ್ದೇನೆ ಅಂತಾ ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಯಾವ ನಮ್ಮ ನಿರ್ಧಾರ ತೆಗೆದುಕೊಳ್ಳುತ್ತೋ ನೋಡೋಣ ಅಂತಾ ಹೇಳಿರುವ ಶಾಸಕ ಎಂಟಿಬಿ ನಾಗರಾಜ ರಾಜೀನಾಮೆಯಿಂದ ಹಿಂದೆ ಸರಿಯುವ ಸಾಧ್ಯತೆ ಹೆಚ್ಚಿದೆ.




Leave a Reply

Your email address will not be published. Required fields are marked *

error: Content is protected !!