ನವದೆಹಲಿ: ಸತತ ನಾಲ್ಕು ದಿನಗಳಿಂದ ವಿಚಾರಣೆ ಎದುರಿಸ್ತಿರುವ ಡಿ.ಕೆ ಶಿವಕುಮಾರ್ ಅರೆಸ್ಟ್ ಆಗಿದ್ದಾರೆ. ದಾಖಲೆ ಇಲ್ಲದೆ ಸಿಕ್ಕ 8.5 ಕೋಟಿ ರೂಪಾಯಿ ಹಣದ ಬಗ್ಗೆ ಸರಿಯಾದ ಮಾಹಿತಿ ನೀಡಿದ ಕಾರಣ ಮಾಜಿ ಸಚಿವ ಡಿ.ಕೆ ಶಿವಕುಮಾರ ಅವರನ್ನ ಬಂಧಿಸಲಾಗಿದೆ ಎಂದು ಇಡಿ ತಿಳಿಸಿದೆ.
ಡಿ.ಕೆ ಶಿವಕುಮಾರ ಬಂಧನಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಿಡಿಸಿದ್ದು, ವಿಚಾರ ಗೊತ್ತಾಗ್ತಿದ್ದಂತೆ ಇಡಿ ಕಚೇರಿ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ, ನನ್ನನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಿಜೆಪಿ ಸ್ನೇಹಿತರಿಗೆ ಧನ್ಯವಾದಗಳು ಎಂದಿದ್ದಾರೆ. ಐಟಿ ಮತ್ತು ಇಡಿ ಪ್ರಕರಣಗಳು ರಾಜಕೀಯ ಪ್ರೇರಿತ. ನಾನು ಬಿಜೆಪಿ ಸೇಡಿನ ರಾಜಕಾರಣದ ಸಂತ್ರಸ್ತ ಎಂದಿದ್ದಾರೆ.