ನವದೆಹಲಿ: ಮಾಜಿ ಸಚಿವ, ಶಾಸಕ ಡಿಕೆ ಶಿವಕುಮಾರ ಜಾಮೀನು ಅರ್ಜಿಯನ್ನ ಅಕ್ಟೋಬರ್ 14ಕ್ಕೆ ಮುಂದೂಡಲಾಗಿದೆ. ಹೀಗಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ ಅವರು ಇನ್ನು 14 ದಿನ ತಿಹಾರ್ ಜೈಲಿನಲ್ಲಿ ಫಿಕ್ಸ್ ಆಗಬೇಕಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ವಶದಲ್ಲಿರುವ ಮಾಜಿ ಸಚಿವ ಇದೀಗ ತಿಹಾರ್ ಜೈಲಿನಲ್ಲಿದ್ದಾರೆ. ಇದ್ರಿಂದಾಗಿ ಜಾಮೀನು ಅರ್ಜಿ ಸಲ್ಲಿಸಿದ್ರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶಕುಮಾರ ಕೈಟ್ ಅವರು ಅಕ್ಟೋಬರ್ 14ಕ್ಕೆ ಮುಂದೂಡಿದ್ದಾರೆ. ಈ ಮೂಲಕ ಇನ್ನು 14 ದಿನಗಳ ಕಾಲ ತಿಹಾರ್ ಜೈಲು ಖಾಯಂ.