ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರ ಇಂದು ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದ್ದು, ವರ್ಚುಯಲ್ ರ್ಯಾಲಿ ಮೂಲಕ ಅಧಿಕಾರ ಸ್ವೀಕರಿಸಲಿದ್ದಾರೆ.
ಕೆಪಿಸಿಸಿ ಕಚೇರಿಯ ಹಿಂಭಾಗದಲ್ಲಿರುವ ಹೊಸ ಸಭಾಂಗಣದಲ್ಲಿ, ಕಾಂಗ್ರೆಸ್ ನ ಹಿರಿಯ ನಾಯಕರ ಸಮ್ಮುಖದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಪ್ರತಿಜ್ಞಾ ವಿಧಿ ಕಾರ್ಯಕ್ರವನ್ನ ರಾಜ್ಯದ ಎಲ್ಲಡೆಯಿಂದ 10 ಲಕ್ಷ ಕಾರ್ಯಕರ್ತರು ವೀಕ್ಷಣೆ ಮಾಡಲಿದ್ದಾರೆ.
ಪ್ರತಿಜ್ಞಾ ವಿಧಿ ಸ್ವೀಕರಿಸುವ ವೇದಿಕೆ ಸಿದ್ಧಗೊಂಡಿದ್ದು, 10.30ಕ್ಕೆ ಕೆಪಿಸಿಸಿಯ 41ನೇ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದರೊಂದಿಗೆ ಅಧಿಕೃತವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿಯಲಿದ್ದಾರೆ.