ಡಿಕೆಶಿ ಪ್ರತಿಜ್ಞಾ ವಿಧಿಗೆ ಕ್ಷಣಗಣನೆ

330

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರ ಇಂದು ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದ್ದು, ವರ್ಚುಯಲ್ ರ್ಯಾಲಿ ಮೂಲಕ ಅಧಿಕಾರ ಸ್ವೀಕರಿಸಲಿದ್ದಾರೆ.

ಕೆಪಿಸಿಸಿ ಕಚೇರಿಯ ಹಿಂಭಾಗದಲ್ಲಿರುವ ಹೊಸ ಸಭಾಂಗಣದಲ್ಲಿ, ಕಾಂಗ್ರೆಸ್ ನ ಹಿರಿಯ ನಾಯಕರ ಸಮ್ಮುಖದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಪ್ರತಿಜ್ಞಾ ವಿಧಿ ಕಾರ್ಯಕ್ರವನ್ನ ರಾಜ್ಯದ ಎಲ್ಲಡೆಯಿಂದ 10 ಲಕ್ಷ ಕಾರ್ಯಕರ್ತರು ವೀಕ್ಷಣೆ ಮಾಡಲಿದ್ದಾರೆ.

ಪ್ರತಿಜ್ಞಾ ವಿಧಿ ಸ್ವೀಕರಿಸುವ ವೇದಿಕೆ ಸಿದ್ಧಗೊಂಡಿದ್ದು, 10.30ಕ್ಕೆ ಕೆಪಿಸಿಸಿಯ 41ನೇ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದರೊಂದಿಗೆ ಅಧಿಕೃತವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿಯಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!