ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ವಾಪಸ್ ಪಡೆಯುವ ಸಂಬಂಧ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈಕೋರ್ಟ್ ನಲ್ಲಿ ಇನ್ನೂ ವಿಚಾರಣೆ ನಡೆಯುತ್ತಿದೆ. ಹೀಗಿರುವಾ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದಿದ್ದು, ಕಾನೂನು ಬಾಹಿರ. ಪ್ರಕರಣವನ್ನು ರಾಜಕೀಯಗೊಳಿಸುವ ಯತ್ನ ನಡೆಸಿದ್ದಾರೆ ಎಂದರು.
ಇವರು ಮಾಡುವ ಕೆಲಸವನ್ನು ಸಮಾಜ ಹಾಗೂ ಕೋರ್ಟ್ ಗಮನಿಸುತ್ತಿದೆ. ಅವರ ತಪ್ಪನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ. ವಿರುದ್ಧವಾದ ತೀರ್ಪು ಬಂದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.