ದ್ರಾವಿಡಂ, ಕಾಂಗ್ರೆಸ್ ಮುಕ್ತ ಭಾರತ ಎಂದರೆ ಏನರ್ಥ?

187

ಪ್ರಜಾಸ್ತ್ರ ಸುದ್ದಿ

ಚೆನ್ನೈ: ಸನಾತನ ಧರ್ಮದ ಕುರಿತು ಹೇಳಿಕೆ ನೀಡಿರುವ ಡಿಎಂಕೆ ಸಚಿವೆ ಉದಯನಿಧಿ ಸ್ಟಾಲಿನ್, ತಮ್ಮ ಹೇಳಿಕೆಗೆ ಬದ್ಧನಾಗಿದ್ದೇನೆ. ಕಾನೂನು ಕ್ರಮ ಎದುರಿಸಲು ಸಿದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಈ ಮೂಲಕ ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ.

ನಾನು ನರಮೇಧಕ್ಕೆ ಆಹ್ವಾನಿಸಿದ್ದೇನೆ ಎಂದು ಕೆಲವರು ಬಾಲಿಶರಾಗಿ ಹೇಳುತ್ತಿದ್ದಾರೆ. ಕೆಲವರು ದ್ರಾವಿಡಂ ನಿರ್ಮೂಲನೆ ಮಾಡಬೇಕು ಎಂದರು. ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಎಂದು ಪ್ರಧಾನಿ ಹೇಳಿದರು. ಇದರ ಅರ್ಥ ಡಿಎಂಕೆ, ಕಾಂಗ್ರೆಸ್ ನವರನ್ನು ಕೊಲ್ಲಬೇಕೇ ಎಂದು ಪ್ರಶ್ನಿಸಿದ್ದಾರೆ.

ಸಮಾಜದಲ್ಲಿ ಸಮಾನತೆಯನ್ನು ವಿರೋಧಿಸುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು. ಇದು ಡೆಂಗ್ಯೂ, ಮಲೇರಿಯಾಕ್ಕೆ ಸಮಾನ ಉದಯನಿಧಿ ಸ್ಟಾಲಿನ್ ಎಂದು ಹೇಳಿದ್ದರು. ಇವರ ಹೇಳಿಕೆ ವಿರುದ್ಧ ಬಿಜೆಪಿ ಹಾಗೂ ಹಿಂದೂಪರ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!