ಪ್ರಜಾಸ್ತ್ರ ಸುದ್ದಿ
ವಿಜಯಪುರ: ಗುಮ್ಮಟನಗರಿಯ ಡೋಣಿ ನದಿ ಪ್ರವಾಹ ಸೃಷ್ಟಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಬಬಲೇಶ್ವರ ಶಾಸಕ, ಮಾಜಿ ಸಚಿವ ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಫೋನ್ ಮೂಲಕ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಜೊತೆ ಮಾತನಾಡಿದ ಎಂಬಿಪಿ, ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಡೋಣಿ ನದಿ ಪ್ರವಾಹ ಸೃಷ್ಟಿಸಿದೆ. ಹೀಗಾಗಿ ದಾಶ್ಯಾಳ, ತೊನಶ್ಯಾಳ, ಕೋಟ್ಯಾಳ, ಸಾರವಾಡ ಭಾಗದಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೂಡಲೇ ಅಗತ್ಯವಿರುವ ಸುರಕ್ಷತೆ ಹಾಗೂ ಜನರಿಗೆ ಸೂಕ್ತ ಸೌಲಭ್ಯ ಕಲ್ಪಿಸಬೇಕು ಎಂದು ಹೇಳಿದ್ದಾರೆ.
ಈಗಾಗಲೇ ಬಬಲೇಶ್ವರ, ತಿಕೋಟಾ ತಾಲೂಕುಗಳ ತಹಶೀಲ್ದಾರ್ ಜೊತೆ ಮಾತನಾಡಿದ್ದು, ಕೂಡಲೇ ಡೋಣಿ ನದಿ ತೀರದ ಹಳ್ಳಿಗರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.