ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಹೀಗಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ಆದ್ದರಿಂದ ರಾಜಕೀಯ ಪಕ್ಷಗಳ ಕುರಿತು ಪ್ರಚಾರ ಮಾಡುವಾಗ, ಹೇಳಿಕೆ ನೀಡುವಾಗ, ಸೋಷಿಯಲ್ ಮೀಡಿಯಾದಲ್ಲಿ ಬರೆಯುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕು. ಇನ್ನು ಆಟೋಗಳ ಮೇಲೆ ರಾಜಕೀಯ ಪಕ್ಷಗಳ ಫೋಟೋ ಹಾಕಿದ್ರೆ ಕೇಸ್ ಹಾಕಲಾಗುವುದು ಎಂದು ತಿಳಿಸಲಾಗಿದೆ.
ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಆಟೋ ಮೇಲೆ ರಾಜಕೀಯ ಪ್ರಚಾರ ಮಾಡಬಾರದು. ಬ್ಯಾನರ್, ಸ್ಟಿಕರ್, ರಾಜಕೀಯ ನಾಯಕರ ಫೋಟೋ ಅಂಟಿಸಬಾರದು ಎಂದು ಹೇಳಿದ್ದಾರೆ. ಈ ಸಂಬಂಧ 11 ಆರ್ ಟಿಒ ವಲಯಗಳಲ್ಲಿ 450ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದು, ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಲಾಗಿದೆ.