ಪ್ರಜಾಸ್ತ್ರ ಅಪರಾಧ ಸುದ್ದಿ
ಹಾವೇರಿ: ಓರ್ವ ಯುವಕ ಹಾಗೂ ಬಾಲಕನೊಬ್ಬನನ್ನ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ತಾಲೂಕಿನ ಯತ್ತಿನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ನಿಂಗಪ್ಪ ಶಿರಗುಪ್ಪ(28) ಹಾಗೂ ಗಣೇಶ ಕುಂದಾಪುರ(13) ಕೊಲೆಯಾದ ದುರ್ದೈವಿಗಳು.
ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ. ಯಾರು ಮಾಡಿದ್ದು, ಯಾವ ಕಾರಣಕ್ಕೆ ಮಾಡಿದ್ದು ಏನು ಅನ್ನೋದು ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.