ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಜಿಲ್ಲೆಯ ಇಂಡಿ ತಾಲ್ಲೂಕಿನ ಬಂಥನಾಳ ಗ್ರಾಮದಲ್ಲಿ ಇಬ್ಬರನ್ನ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಗ್ರಾಮದ ತೋಟದ ಮನೆಯಲ್ಲಿ ರುದ್ರಪ್ಪ ಆಲಮೇಲ ಹಾಗೂ ಈರಮ್ಮ ಆಲಮೇಲ ಎಂಬುವರ ಹತ್ಯೆಯಾಗಿದೆ.
ಈರಮ್ಮಳ ಸಹೋದರ ಲಕ್ಷ್ಮಣ್ ಕೊಡಲಿಯಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ ಎನ್ನಲಾಗ್ತಿದೆ.
ಮಂಗಳವಾರ ತಡರಾತ್ರಿ ಈ ಒಂದು ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಇಂಡಿ ಸಿಪಿಐ ರಾಜಶೇಖರ ಬಡೆದೇಸಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
ಈ ಸಂಬಂಧ ಇಂಡಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.