ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಡಾ.ರಾಜ್ ಕುಮಾರ್ ಕುಟುಂಬಸ್ಥರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೆಲ ವಿಚಾರಗಳ ಕುರಿತು ಮಾತುಕತೆ ನಡೆಸಿದರು. ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್, ಪಾರ್ವತಮ್ಮ ಹಾಗೂ ಡಾ.ಪುನೀತ್ ಅವರ ಸಮಾಧಿಗಳಿವೆ. ಅವುಗಳ ಅಭಿವೃದ್ಧಿ ಕುರಿತು ಚರ್ಚಿಸಿದರು.
ರಾಜ್ ಕುಟುಂಬ ಸಿದ್ಧಪಡಿಸಿದ ಪಿಪಿಟಿ ವೀಕ್ಷಣೆ ಮಾಡಿದ ಸಿಎಂ ಬೊಮ್ಮಾಯಿ, ಪಿಡಬ್ಲುಡಿಯಿಂದ ಅಂದಾಜು ಮೊತ್ತ ತಯಾರಿಸಲು ಸೂಚನೆ ನೀಡಿದರು. ಇಲಾಖೆಯಿಂದ ಯೋಜನೆಯ ರೂಪರೇಷ ರೆಡಿಯಾದ ನಂತರ ಮತ್ತೊಂದು ಸುತ್ತಿನ ಸಭೆ ನಡೆಸೋಣ ಎಂದರು.
ರಾಘವೇಂದ್ರ ರಾಜಕುಮಾರ್, ಪುನೀತ್ ಪತ್ನಿ ಅಶ್ವಿನಿ, ನಟ ಯುವ ರಾಜಕುಮಾರ್ ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.