ಪ್ರಜಾಸ್ತ್ರ ಸುದ್ದಿ
ಇಂಡಿ: ಚರಂಡಿ ಕಾಮಗಾರಿ ವೇಳೆ ಏಕಾಏಕಿ ಪೌರ ಕಾರ್ಮಿಕನ ಮೇಲೆ ಮಣ್ಣು ಕುಸಿದುಬಿದ್ದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ 17ನೇ ವಾರ್ಡಿನಲ್ಲಿ ಈ ಘಟನೆ ನಡೆದಿದೆ. 42 ವರ್ಷದ ಅಶೋಕ ಕಡಿಮನಿ ಅನ್ನೋ ಪೌರ ಕಾರ್ಮಿಕನ ಮೇಲೆ ಮಣ್ಣು ಕುಸಿದು ಬಿದ್ದಿದೆ.
ಜೆಸಿಬಿ ಮೂಲಕ ಮಣ್ಣು ತೆಗೆಯುವುದರೊಂದಿಗೆ ಅಶೋಕನನ್ನ ಪ್ರಾಣಾಪಾಯದಿಂದ ಪಾರುಮಾಡಲಾಗಿದೆ. ತುರ್ತು ಚಿಕಿತ್ಸೆಗಾಗಿ ಕಾರ್ಮಿಕ ಅಶೋಕನನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.