ಕಲುಷಿತ ನೀರು ಸೇವನೆ, ಸಾವಿನ ಸಂಖ್ಯೆ 5ಕ್ಕೆ ಏರಿಕೆ

117

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಶುಕ್ರವಾರ ಪಾರ್ವತಮ್ಮ ಹಾಗೂ ರುದ್ರಣ್ಣ ಎಂಬವರಿಬ್ಬರು ಮೃತಪಟ್ಟಿದ್ದಾರೆ. ಈ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ ಈಗಾಗ್ಲೇ ನಗರಸಭೆಯ ಎಇಇ, ಜೆಇ, ವಾಲ್ಟ್ ಮ್ಯಾನ್ ಅಮಾನತು ಮಾಡಿದ್ದಾರೆ.

ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 100ಕ್ಕೂ ಹೆಚ್ಚು ಜನರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಲ್ಯಾಬ್ ವರದಿ ಬಂದಿದ್ದು, ವಿಷಕಾರಿ ಅಂಶ ಪತ್ತೆಯಾಗಿಲ್ಲ. ಆದರೆ, ಕಾಲರಾ ಮಾದರಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!