ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಸ್, ಟ್ರಕ್, ಆಟೋ ಸೇರಿದಂತೆ ವಿವಿಧ ವಾಹನ ಚಾಲಕರ ಹಾಗೂ ಸಿಬ್ಬಂದಿ ಅನುಕೂಲಕ್ಕಾಗಿ ಹೊಸ ಬಿಲ್ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.
ಚಾಲಕರು, ಟೆಕ್ನಿಕಲ್ ಸಿಬ್ಬಂದಿ ಆಕಸ್ಮಿಕವಾಗಿ ಮೃತಪಟ್ಟರೆ, ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಇದಕ್ಕಾಗಿ ಕಾರ್ಮಿಕ ಇಲಾಖೆಯಿಂದ ಹೊಸ ಬಿಲ್ ಜಾರಿ ಮಾಡಲಾಗುವುದು ಎಂದಿದ್ದಾರೆ. ನಾನು ಚಾಲಕನಾಗಿ ಕೆಲಸ ಮಾಡಿದ್ದು, ಅವರ ಕಷ್ಟ ಏನು ಎಂಬುವುದು ನನಗೆ ಗೊತ್ತಿದೆ. ಹೀಗಾಗಿ ಈ ಹೊಸ ಬಿಲ್ ಮೂಲಕ ಪರಿಹಾರ ಸಿಗಲಿದೆ ಎಂದರು.