ಚಾಲಕರು, ತಾಂತ್ರಿಕ ಸಿಬ್ಬಂದಿಗಾಗಿ ಹೊಸ ಬಿಲ್: ಶಿವರಾಂ ಹೆಬ್ಬಾರ್

256

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಸ್, ಟ್ರಕ್, ಆಟೋ ಸೇರಿದಂತೆ ವಿವಿಧ ವಾಹನ ಚಾಲಕರ ಹಾಗೂ ಸಿಬ್ಬಂದಿ ಅನುಕೂಲಕ್ಕಾಗಿ ಹೊಸ ಬಿಲ್ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.

ಚಾಲಕರು, ಟೆಕ್ನಿಕಲ್ ಸಿಬ್ಬಂದಿ ಆಕಸ್ಮಿಕವಾಗಿ ಮೃತಪಟ್ಟರೆ, ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಇದಕ್ಕಾಗಿ ಕಾರ್ಮಿಕ ಇಲಾಖೆಯಿಂದ ಹೊಸ ಬಿಲ್ ಜಾರಿ ಮಾಡಲಾಗುವುದು ಎಂದಿದ್ದಾರೆ. ನಾನು ಚಾಲಕನಾಗಿ ಕೆಲಸ ಮಾಡಿದ್ದು, ಅವರ ಕಷ್ಟ ಏನು ಎಂಬುವುದು ನನಗೆ ಗೊತ್ತಿದೆ. ಹೀಗಾಗಿ ಈ ಹೊಸ ಬಿಲ್ ಮೂಲಕ ಪರಿಹಾರ ಸಿಗಲಿದೆ ಎಂದರು.




Leave a Reply

Your email address will not be published. Required fields are marked *

error: Content is protected !!