ನ್ಯಾಯ ಕೊಡಿ ಚೊಂಬೇಶ್ವರವೆಂದು ಕಾಂಗ್ರೆಸ್ ಪ್ರತಿಭಟನೆ

52

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ವಿಧಾನಸೌಧದ ಮುಂದಿನ ಗಾಂಧಿ ಪ್ರತಿಮೆ ಎದುರು, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕಕ್ಕೆ ನ್ಯಾಯ ಕೊಡಿ. ಬರ ಪರಿಹಾರ ಕೂಡಲೇ ಬಿಡುಗಡೆ ಮಾಡಿ ಚೊಂಬೇಶ್ವರ ಎಂದು ಎಲ್ಲರೂ ಕೂಗಿದರು. ಕರ್ನಾಟಕಕ್ಕೆ ಬಿಜೆಪಿ ಖಾಲಿ ಚೊಂಬು ಕೊಟ್ಟಿದೆ. ನರೇಂದ್ರ ಚೊಂಬೇಶ್ವರನಿಗೆ, ಭಾರತೀಯ ಚೊಂಬು ಪಾರ್ಟಿಗೆ ಧಿಕ್ಕಾರ ಎಂದು ಘೋಷಣೆ ಹಾಕಿದರು. ಗೋ ಬ್ಯಾಕ್ ಮೋದಿ, ಗೋ ಬ್ಯಾಕ್ ಅಮಿತ್ ಶಾ, ಗೋ ಬ್ಯಾಕ್ ನಿರ್ಮಲಾ ಸೀತಾರಾಮನ್ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡದೆ ರೈತರು ಹಾಗೂ ರಾಜ್ಯ ಜನತೆ ವಿರುದ್ಧ ಕೇಂದ್ರದ ಮೋದಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಸುರ್ಜೇವಾಲ್ ಕಿಡಿ ಕಾರಿದರು.

ಇದುವರೆಗೂ ನಾವು ರಾಜ್ಯದ ರೈತರಿಗೆ 650 ಕೋಟಿ ರೂಪಾಯಿ ಪರಿಹಾರ ನೀಡಿದ್ದೇವೆ. ಬರ ಪರಿಹಾರಕ್ಕೆ 18,172 ಕೋಟಿ ರೂಪಾಯಿ ಬಿಡುಗಡೆ ಮಾಡದೆ ಕರ್ನಾಟಕ ನೆಲದಲ್ಲಿ ಕಾಲಿಡಲು ಅವರಿಗೆ ಯಾವುದೇ ಹಕ್ಕಿಲ್ಲವೆಂದು ಸಿಎಂ ಸಿದ್ದರಾಮಯ್ಯ ಸೇರಿ ಎಲ್ಲ ನಾಯಕರು ಧಿಕ್ಕಾರ ಕೂಗಿದರು.




Leave a Reply

Your email address will not be published. Required fields are marked *

error: Content is protected !!