ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬರ ಪರಿಹಾರ ಬಿಡುಗಡೆ ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಜಟಾಪಟಿ ನಡೆದಿದೆ. ಅದು ಚುನಾವಣೆಯಲ್ಲಿಯೂ ಮುಂದುವರೆದಿದ್ದು, ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ, ನಿಜ ಒಪ್ಪಿಕೊಂಡಿತು ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಬರ ಪರಿಹಾರಕ್ಕಾಗಿ ಹಲವು ಬಾರಿ ಮನವಿ ಮಾಡಿದರೂ ಪರಿಹಾರ ನೀಡಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಇದು ನಮ್ಮ ಹಕ್ಕು. ಭಿಕ್ಷೆ ಕೇಳುತ್ತಿಲ್ಲವೆಂದು ಕಿಡಿ ಕಾರಿದ್ದರು. ಈಗ ಕೇಂದ್ರ ಸಚಿವರ ಹೇಳಿಕೆ ರಾಜ್ಯ ಕೈ ನಾಯಕರಿಗೆ ಅಸ್ತ್ರವಾಗಿದೆ.
ಬರ ಪರಿಹಾರ ಕೇಳುವಲ್ಲಿ ವಿಳಂಬ ಮಾಡಲಾಗಿದೆ. ಚುನಾವಣೆ ನೀತಿ ಸಂಹಿತೆ ಬಂದಿರುವುದರಿಂದ ಹಣ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲವೆಂದು ವಿತ್ ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಹೇಳಿದ್ದು, ಇದೆಲ್ಲ ಸುಳ್ಳು. ನಾಲ್ಕು ತಿಂಗಳ ಹಿಂದೆಯ ತೆರಿಗೆ ಹಣ, ಬರ ಪರಿಹಾರ ಸೇರಿ ಆರ್ಥಿಕ ಅನ್ಯಾಯದ ಬಗ್ಗೆ ಮನವಿ ಸಲ್ಲಿಸಲಾಗಿದೆ. ಒಬ್ಬೊಬ್ಬರು ಒಂದೊಂದು ಸುಳ್ಳು ಹೇಳುವ ಮೂಲಕ ಜನತೆಯ ಮುಂದೆ ಅವರ ಬಣ್ಣ ಬಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆ ಕೇಂದ್ರದಿಂದ ನೀಡಿದ್ದ ಆರ್ಥಿಕ ನೆರವು ಗ್ಯಾರೆಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಬಳಿಸಿಕೊಂಡಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈಗ ಪರಿಹಾರ ಕೇಳುವಲ್ಲಿ ವಿಳಂಬ ಮಾಡಿದ್ದಾರೆ. ನೀತಿ ಸಂಹಿತೆಯಿಂದ ಹಣ ಬಿಡುಗಡೆ ಮಾಡಲು ಆಗಿಲ್ಲ ಎನ್ನುತ್ತಿದ್ದಾರೆ ಅಂತಾ ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿ ರಾಜ್ಯದ ಜನರಿಗೆ ಮೋಸ ಮಾಡಿದ್ದಾರೆ ಎಂದಿದ್ದಾರೆ.