ಪ್ರಜಾಸ್ತ್ರ ಸುದ್ದಿ
ನವದೆಹಲಿ: ಬರ ಪರಿಹಾರ ಸಂಬಂಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಎರಡು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಎನ್ ಡಿಆರ್ ಎಫ್ ನಿಂದ ತಕ್ಷಣ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಸಂಬಂಧಪಟ್ಟ ಸಚಿವರನ್ನು ಸಹ ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಆದರೂ ಪರಿಹಾರ ಬಿಡುಗಡೆ ಮಾಡಿಲ್ಲವೆಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತು. ಈಗ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ನೀಡಿದೆ.
ಬರ ಪರಿಹಾರ, ತೆರಿಗೆ ಹಣ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ದಕ್ಷಿಣ ಭಾರತದ ರಾಜ್ಯಗಳು ಪ್ರತಿಭಟನೆ ನಡೆಸಿದ್ದವು. ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುವ ಹೋರಾಟ ಸಹ ಮಾಡಿದ್ದವು. ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ನಾಯಕರ ನಡುವೆ ವಾಕ್ಸಮರ ಸಹ ನಡೆದಿದೆ.