ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ 18,172 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಭಾನುವಾರ ವಿಧಾನಸೌಧದ ಮುಂದಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜಿಲ್ಲೆಯ ಬನಹಟ್ಟಿ, ರಬಕವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಪರ ಪ್ರಚಾರ ಮಾಡಿದ ಸಿಎಂ, ಕೋರ್ಟ್ ಮೊರೆ ಹೋದ ಮೇಲೆ 3,498 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ಪೂರ್ತಿ ಬಿಡುಗಡೆ ಮಾಡುವ ತನಕ ಕೋರ್ಟಿನಲ್ಲಿ ಹೋರಾಟ ಮಾಡುತ್ತೇವೆ. ನಾಳೆ ನಾನು, ಡಿಸಿಎಂ, ಸಚಿವರು ಸೇರಿದಂತೆ ಹಲವರು ಭಾಗವಹಿಸಿ ಪ್ರತಿಭಟನೆ ಮಾಡಲಾಗುವುದು ಎಂದರು.