ಪ್ರಜಾಸ್ತ್ರ ಸುದ್ದಿ
ಮೈಸೂರು: ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆ ತೀವ್ರವಾಗಿದೆ. ಈಗಾಗ್ಲೇ 195 ತಾಲೂಕುಗಳಲ್ಲಿ ಬರಗಾಲ ಘೋಷಿಸಲಾಗಿದೆ. ಹೀಗಾಗಿ ಯಾವುದೇ ರೀತಿ ಅದ್ಧೂರಿ ಸಭೆ, ಸಮಾರಂಭಗಳಿಗೆ ಹೋಗದೆ ಸರಳ ಆಚರಣೆಗೆ ಸರ್ಕಾರ ಮುಂದಾಗಿದೆ.
ಈ ಬಾರಿಯ ದಸರಾವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹಾದೇವಪ್ಪ ಹೇಳಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.