ದೇವರಹಿಪ್ಪರಗಿ: ಪಡಗನಾರ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಡಿ.ಜಿ ಸಾಗರ ಬಣದಿಂದ ಪ್ರತಿಭಟನೆ ನಡೆಸಲಾಯ್ತು. ರಾಷ್ಟ್ರೀಯ ಹೆದ್ದಾರಿ 50 ಬಂದ್ ಮಾಡಿ ಪ್ರತಿಭಟನೆ ನಡೆಸಲಾಯ್ತು.
ಪಡಗಾನೂರ ಗ್ರಾಮಕ್ಕೆ ಪ್ರತ್ಯೇಕ ಗ್ರಾಮ ಪಂಚಾಯ್ತಿ ಮಂಜೂರು, ರಾಷ್ಟ್ರೀಯ ಹೆದ್ದಾರಿ 50ರಿಂದ ಪಡಗಾನೂರ ಗ್ರಾಮದವರೆಗಿನ 2 ಕಿಲೋ ಮೀಟರ್ ರಸ್ತೆ ಡಾಂಬರೀಕರಣ, ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯ್ತು. ಬಳಿಕ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯ್ತು.
ರಾಷ್ಟ್ರೀಯ ಹೆದ್ದಾರಿ 50ನ್ನು ಬಂದ್ ಮಾಡಿದ ಪರಿಣಾಮ ಕೆಲಕಾಲ ಸಂಚಾರ ಅಸ್ತವ್ಯಸ್ತವಾಯ್ತು. ಅಲ್ದೇ ಸಾಲುಗಟ್ಟಿ ನಿಂತಿದ್ದ ವಾಹನಗಳಲ್ಲಿದ್ದ ಪ್ರಯಾಣಿಕರು ಪ್ರತಿಭಟನೆಯ ಬಿಸಿಯನ್ನ ಅನುಭವಿಸಿದ್ರು.