ಹದ್ದಿನ ಹೊಡೆತಕ್ಕೆ ಡಿಕೆಶಿ ಹೆಲಿಕಾಪ್ಟರ್ ಗ್ಲಾಸ್ ಪೀಸ್ ಪೀಸ್

120

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಹೆಲಿಕಾಪ್ಟರ್ ಮೂಲಕ ಸಂಚರಿಸುತ್ತಾ ಪ್ರತಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಅದರಂತೆ ಇಂದು ಪ್ರಚಾರಕ್ಕೆ ಹೊರಟಿದ್ದಾಗ ಅವರ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದೆ.

ಜಕ್ಕರು ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಹದ್ದು ಡಿಕ್ಕಿಯಾದ ಪರಿಣಾಮ ಹೆಲಿಕಾಪ್ಟರ್ ಗ್ಲಾಸ್ ಒಡೆದು ಹೋಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಸುರಕ್ಷಿತವಾಗಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!