ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಇಲ್ಲಿನ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಎರ್.ಎಂ ಮಂಜುನಾಥಗೌಡರ ನಿವಾಸದ ಮೇಲೆ ಇಡಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಬೆಟ್ಟಮಕ್ಕಿಯ ಮನೆ, ಹಣಗೆರೆಕಟ್ಟೆ ಹತ್ತಿರದ ಕರುಕುಚ್ಚಿ, ಶಿವಮೊಗ್ಗದ ಶಾಂತಿನಗರ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ.
ಡಿಸಿಸಿ ಬ್ಯಾಂಕಿನಲ್ಲಿ ಬಹುಕೋಟಿ ನಕಲಿ ಬಂಗಾರದ ಹಗರಣ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ತಿಂಗಳ ಹಿಂದೆಯೇ ಬ್ಯಾಂಕಿನಿಂದ ಇಡಿ ಅಧಿಕಾರಿಗಳು ಮಾಹಿತಿ ಕೇಳಿದ್ದರಂತೆ. ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ.