ಯಾವನು ಬರುತ್ತಾನೋ ನೋಡೋಣ: ಈಶ್ವರಪ್ಪ

89

ಪ್ರಜಾಸ್ತ್ರ ಸುದ್ದಿ

ತೀರ್ಥಹಳ್ಳಿ: ಮಗನಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿರುವುದಕ್ಕೆ ಬಂಡಾಯವೆದ್ದಿರುವ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ತಮ್ಮ ವಿರುದ್ಧ ಇಡಿ, ಐಟಿ ದಾಳಿ ಬಗೆಗಿನ ವದಂತಿ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರ ಯಾವನು ಬರುತ್ತಾನೋ ನೋಡೋಣ ಎಂದು ವಾಗ್ದಾಳಿ ನಡೆಸಿದರು.

ದಾಳಿ ನಡೆಸಲು ಯಾವನು ಬರುತ್ತಾನೋ ನೋಡೋಣ. ನನ್ನ ರಾಜಕೀಯ ಜೀವನದಲ್ಲಿ ಇಂತವನ್ನು ತುಂಬಾ ಎದುರಿಸಿದ್ದೇನೆ ಎನ್ನುವ ಮೂಲಕ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಮಗನಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಯಡಿಯೂರಪ್ಪ ಹಾಗೂ ಅವರ ಮಕ್ಕಳ ವಿರುದ್ಧ ಕಿಡಿ ಕಾರುತ್ತಿದ್ದಾರೆ.

ಮೋದಿ ಫೋಟೋ ಬಳಕೆ ವಿಚಾರವಾಗಿಯೂ ಈಶ್ವರಪ್ಪ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಡುವೆ ವಾಕ್ಸಮರ ನಡೆದಿದೆ. ಅಲ್ಲದೇ ಶುಕ್ರವಾರ ಕೋರ್ಟ್ ನಲ್ಲಿ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!