ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಂಸದೆ ಡಿ.ಕೆ ಸುರೇಶ್ ಅವರಿಗೆ ಇಡಿ ನೋಟಿಸ್ ನೀಡಿದೆ. ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ನಾನು ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗುವುದಿಲ್ಲ ಎಂದಿದ್ದಾರೆ.
ನನಗೆ ಹಾಗೂ ನನ್ನ ತಮ್ಮನಿಗೆ ನೋಟಿಸ್ ಬಂದಿದೆ. ಕಾರಣಾಂತರಗಳಿಂದ ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗಲು ಆಗುವುದಿಲ್ಲ. ಹೀಗಾಗಿ ಬೇರೊಂದು ದಿನ ಹಾಜರಾಗಲು ಅವಕಾಶ ನೀಡಲು ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.