ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ನಿವಾಸ ಸೇರಿದಂತೆ ಕೆಲವು ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಹಾಗೂ ಜಿಲ್ಲೆಯಲ್ಲಿ ಶಾಸಕರಿಗೆ ಸಂಬಂಧಿಸಿದ ಆಸ್ತಿ, ಸಂಸ್ಥೆಗಳ ಮೇಲೆ ದಾಳಿ ಮಾಡಲಾಗಿದೆ.
ಕೋಚಿಮುಲ್(ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಒಕ್ಕೂಟ) ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಸಂಸದ ಎನ್.ಮುನಿಸ್ವಾಮಿ ಆರೋಪಿಸಿದ್ದರು. ಶಾಸಕ ಕೆ.ವೈ ನಂಜೇಗೌಡ ಕೋಚಿಮುಲ್ ಅಧ್ಯಕ್ಷರೂ ಆಗಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಪ್ರತಿನಿಧಿಸುತ್ತಿರುವ ಶಾಸಕ ಕೆ.ವೈ ನಂಜೇಗೌಡಗೆ ಸಂಬಂಧಿಸಿದ ಕಡೆಗಳಲ್ಲಿ ಶೋಧ ಕಾರ್ಯ ನಡೆದಿದೆ.