ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ ತಾಯಿ ಹಾಗೂ ಪತ್ನಿಗೆ ಇಡಿ ಸಮನ್ಸ್ ನೀಡಿದೆ. ಇದನ್ನ ರದ್ದು ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ಮುಂದೂಡಲಾಗಿದೆ.
ತಾಯಿ ಹಾಗೂ ಪತ್ನಿಯ ಅರ್ಜಿಯ ವಿಚಾರಣೆಯನ್ನ ನವೆಂಬರ್ 7ಕ್ಕೆ ದೆಹಲಿ ಹೈಕೋರ್ಟ್ ಮುಂದೂಡಿದೆ. ಡಿಕೆಶಿ ತಾಯಿ ಪರ ವಕೀಲ ದಯಾನಂದ ಕೃಷ್ಣನ್ ವಾದ ಮಂಡಿಸಿದ್ರು. ಅನಾರೋಗ್ಯದ ಕಾರಣಕ್ಕೆ ಬೆಂಗಳೂರಿನಲ್ಲಿಯೇ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಇಂದು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನವೆಂಬರ್ 7ಕ್ಕೆ ವಿಚಾರಣೆಯನ್ನ ಮುಂದೂಡಿದೆ.