ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

209

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಇಂದು ಇಡಿ ವಿಚಾರಣೆಗೆ ಕರೆಯಲಾಗಿದ್ದು, ಅವರು ಹಾಜರಾಗಿದ್ದಾರೆ. ಇದನ್ನು ಖಂಡಿಸಿ ದೇಶ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಹುಲ್ ಗಾಂಧಿಯನ್ನು 50 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. ಇದೀಗ ಸೋನಿಯಾ ಗಾಂಧಿಯವರ ವಿಚಾರಣೆ ನಡೆಸಿದೆ. ಬರೀ ಸುಳ್ಳು, ಹೆದರಿಸುವುದು, ನಮ್ಮ ನಾಯಕರುಗಳಿಗೆ ಕಿರುಕುಳ ನೀಡುವುದು ಮಾಡುತ್ತಿದೆ. ದ್ವೇಷ ರಾಜಕಾರಣ ಮಾಡುವುದನ್ನು ನಿಲ್ಲಿಸಲಿ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!